ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Wednesday, 16 September 2026

Ganesha Chaturthi- 2026- ಗಣೇಶ ಚತುರ್ಥಿ


 2026 ರ ಶ್ರೀ ಗಣೇಶ ಚತುರ್ಥಿಯು ಇಂದು (ದಿ. 14-09-2026) ನಮ್ಮ ಮನೆಯಲ್ಲಿ ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರೂ, ಶ್ರೀ ಶಂಕರ ಜಯಂತಿ ಸಭಾದ ಸಂಸ್ಥಾಪಕರೂ ಆದ ಶ್ರೀ ವಿ.ಎಸ್.ರಾಮಚಂದ್ರನ್ (97 ವರ್ಷ) ಅವರು "ಶ್ರೀ ಗೌರಿ ಮತ್ತು ಶ್ರೀ ಗಣೇಶ" ಮೂರ್ತಿಗಳಿಗೆ ಪೂಜಿಸುವ ಮೂಲಕ ಸಂಪನ್ನವಾಯಿತು.

ಸರ್ವರಿಗೂ ಶ್ರೀ ಗೌರಿ ಮತ್ತು ಶ್ರೀ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಎಲ್ಲರಿಗೂ ಒಳಿತಾಗಲಿ.
-ಆರ್.ಎಸ್.ಅಯ್ಯರ್, ತುಮಕೂರು, ದಿ. 14-09-2026 #rsiyertumakuru




--------------------------------------------------------------------------------------------------------

Youtube Video




Upakarma-VSR- 2026 ಉಪಾಕರ್ಮ


 

Saturday, 22 August 2026

ರಘುನಾಥರಾವ್ ಭೇಟಿ- 18-08-2026- Raghunatha Rao Visit


ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಬಹುಕಾಲದ ಮಿತ್ರರಾದ ಶ್ರೀ ರಘುನಾಥರಾವ್ (90) ರವರು ನಮ್ಮ ತಂದೆಯವರನ್ನು ನೋಡಲೆಂದೇ ಬೆಂಗಳೂರಿನಿಂದ ಇಂದು (ದಿ. 18-08-2026) ಮಧ್ಯಾಹ್ನ ಅನಿರೀಕ್ಷಿತವಾಗಿ ನಮ್ಮ ಮನೆಗೆ ಆಗಮಿಸಿದ್ದು, ಸಂತೋಷವನ್ನುಂಟುಮಾಡಿತು.
ಕಪ್ಪು ಸಫಾರಿ ಉಡುಪಿನಲ್ಲಿದ್ದ 90 ರ ಹರೆಯದ ಶ್ರೀಯುತರ ಅಪಿಯರೆನ್ಸ್ ಯುವಕರನ್ನೂ ನಾಚಿಸುವಂತಿತ್ತು ಎಂದರೆ ಅತಿಶಯೋಕ್ತಿಯಾಗದು! ರಘು ಎಂದೇ ಕುಟುಂಬದ ವಲಯದಲ್ಲಿ ಸುಪರಿಚಿತರಾದ ಅವರು, ಸುಮಾರು 65 ವರ್ಷಗಳಿಗೂ ಹಿಂದಿನಿಂದ ನಮ್ಮ ತಂದೆಯವರ ಸ್ನೇಹಿತರು. ತುಮಕೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದ ಪಕ್ಕದ ದೊಡ್ಡ ಕಟ್ಟಡದಲ್ಲಿದ್ದ ಆ ಕಾಲದ ಹೆಸರಾಂತ ಮಾಡರನ್ ಹೋಟೆಲ್ ನಲ್ಲಿ ಇವರು ವ್ಯವಸ್ಥಾಪಕರಾಗಿ/ ಕ್ಯಾಷಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲೇ ಪಕ್ಕದ ಅಗ್ರಹಾರದ ನಿವಾಸಿಗಳಾಗಿದ್ದರು. ಹೀಗಾಗಿ ನಮ್ಮ ತಂದೆಯವರಿಗೆ ಸುಮಾರು 1960 ನೇ ಇಸವಿಯಿಂದಲೂ ಮಿತ್ರರು. ಕಳೆದ 25 ವರ್ಷಗಳ ಹಿಂದೆ ಇವರು ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದು, ಸದ್ಯ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಇವರಿಗೀಗ 90 ವರ್ಷ. ಇವರ ಅಣ್ಣ ತುಮಕೂರಿನಲ್ಲೇ ಇರುವ ಶ್ರೀ ಗುರುಮೂರ್ತಿ ಆಚಾರ್ ರವರಿಗೆ 95 ವರ್ಷ. ಕುಣಿಗಲ್ ನಲ್ಲಿರುವ ಹಿರಿಯ ಅಣ್ಣ ಶ್ರೀನಿವಾಸ್ ರವರಿಗೆ 98 ವರ್ಷ. ಮೂವರೂ ದೈವಕೃಪೆಯಿಂದ ಆರೋಗ್ಯದಿಂದ ಓಡಾಡಿಕೊಂಡಿದ್ದಾರೆ ಎಂಬ ಮಾಹಿತಿ ಚರ್ಚೆಯ ಸಂದರ್ಭದಲ್ಲಿ ತಿಳಿದಾಗ ನಮಗೋ ಆನಂದ ಹಾಗೂ ಆಶ್ಚರ್ಯ.
ಬಸ್ ನಲ್ಲಿ ತುಮಕೂರಿಗೆ ಬಂದು ಆಟೋ ಹಿಡಿದು ಜಯನಗರಕ್ಕೆ ಬಂದು, ಅಲ್ಲಿಂದ ನಡೆದುಕೊಂಡೇ ವಿಳಾಸ ಹುಡುಕಿಕೊಂಡು ನಮ್ಮ ಮನೆಗೆ ಬಂದ ಶ್ರೀಯುತರು, ಸೀದಾ ನೆಲದ ಮೇಲೇ ಸುಖಾಸನದಲ್ಲಿ ಆಸೀನರಾಗಿ ನಮ್ಮ ತಂದೆಯವರೊಡನೆ ಮಾತುಕತೆ ನಡೆಸಿ ಸಂತೋಷಪಟ್ಟರು. ನಮ್ಮ ತಂದೆಯವರು ಶ್ರೀ ರಘುರವರಿಗೆ ಶಾಲು ಹೊದಿಸಿ ಗೌರವಿಸಿದರು. ಬಳಿಕ ನಗರದ ಉಪ್ಪಾರಹಳ್ಳಿ ನಿವಾಸಿಗಳಾದ ಹಾಗೂ ತಮ್ಮ ಇನ್ನೋರ್ವ ಮಿತ್ರರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಟಿ.ಆರ್.ರೇವಣ್ಣ (98) ರವರ ಮನೆಯ ವಿಳಾಸದ ವಿವರ ನಮ್ಮಿಂದ ಪಡೆದುಕೊಂಡ ಶ್ರೀಯುತರು, ಆಟೋ ಹಿಡಿದು ಅಲ್ಲಿಗೆ ತೆರಳಿದರು. ಇದೀಗ ರಾತ್ರಿ 8 ಗಂಟೆಯಲ್ಲಿ ಆರ್. ವಿಶ್ವನಾಥನ್ ಗೆ ಫೋನ್ ಮಾಡಿ, ಬಸ್ ಮೂಲಕ ಈಗಷ್ಟೇ ಬೆಂಗಳೂರಿನ ಮನೆ ತಲುಪಿದ್ದಾಗಿ ಮಾಹಿತಿ ನೀಡಿದರು.
ಹಿರಿಯ ತಲೆಮಾರಿನವರಲ್ಲಿರುವ ಹಳೆಯ ಕಾಲದ ಆ ಪ್ರೀತಿ, ಸ್ನೇಹ, ವಿಶ್ವಾಸಗಳನ್ನು ನೋಡಿ ನಾವು ಮೂಕವಿಸ್ಮಿತರಾದೆವು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 18-08-2026 #rsiyertumakuru





 

Monday, 10 August 2026

VSR Sanmana- Swathanthrothsava -2026 / ವಿ.ಎಸ್.ಆರ್. ಸ್ವಾತಂತ್ರ್ಯೋತ್ಸವ ಸನ್ಮಾನ-2026 / 09-08-2026


 
"ಸ್ವಾತಂತ್ರ್ಯೋತ್ಸವ-2026" ರ ಪೂರ್ವಭಾವಿಯಾಗಿ ತುಮಕೂರು ಜಿಲ್ಲಾಡಳಿತದ ಪರವಾಗಿ ತುಮಕೂರು ತಾಲ್ಲೂಕು ತಹಸೀಲ್ದಾರರಾದ ಶ್ರೀಮತಿ ಪಿ.ಎಸ್.ರಾಜೇಶ್ವರಿ KAS ಅವರು ಇಂದು (ದಿ.09-08-2026) ನಮ್ಮ ಮನೆಗೆ ಆಗಮಿಸಿ, ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರನ್ನು ಸನ್ಮಾನಿಸಿದರು. ನಾನು ಮತ್ತು ವಿಶ್ವನಾಥನ್ ಈ ಸಂದರ್ಭದಲ್ಲಿ ಇದ್ದೆವು.

ತಹಸೀಲ್ದಾರ್ ರವರ ಜೊತೆಯಲ್ಲಿ ರೆವಿನ್ಯೂ ಅಧಿಕಾರಿ ಶ್ರೀ ಶಿವಾನಂದ ರೆಡ್ಡಿ, ಶೆಟ್ಟಿಹಳ್ಳಿ ಗ್ರಾಮ ಆಡಳಿತಾಧಿಕಾರಿ ಶ್ರೀ ರವಿಕುಮಾರ್ ಮತ್ತು ಮರಳೂರು ಗ್ರಾಮ ಆಡಳಿತಾಧಿಕಾರಿ ಕು. ದಿವ್ಯ ರವರು ಆಗಮಿಸಿದ್ದರು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 09-08-2026






**********************************************************

Youtube Video


**************************************

















Tuesday, 4 August 2026

Datta Kesari Bhat Visit- 19-07-2026-ದತ್ತ ಕೇಸರಿ ಭಟ್ ಭೇಟಿ



 ಮುತ್ತಜ್ಜ ವಿ.ಎಸ್.ರಾಮಚಂದ್ರನ್ (97) ಅವರೊಡನೆ ಮರಿಮಗ ದತ್ತ ಕೇಸರಿ ಭಟ್......







*******************************************************************








Wednesday, 22 July 2026

Gayathri Visit July 2026 - ಗಾಯತ್ರಿ ಭೇಟಿ


 ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರೂ, ಶ್ರೀ ಶಂಕರ ಜಯಂತಿ ಸಭಾ ಸಂಸ್ಥಾಪಕರೂ ಆದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಯೋಗಕ್ಷೇಮ ವಿಚಾರಿಸಲು ಇಂದು (ದಿ. 22-07-2026) ಬೆಂಗಳೂರಿನಿಂದ ನಮ್ಮ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ್ ಮತ್ತು ಅವರ ಪುತ್ರಿ ಕು. ನಮಿತಾ ಅವರು ನಮ್ಮ ಮನೆಗೆ ಆಗಮಿಸಿದ್ದರು.

-ಆರ್.ಎಸ್.ಅಯ್ಯರ್, ತುಮಕೂರು, ದಿ. 22-07-2026 #rsiyertumakuru





Friday, 26 June 2026

ಶ್ರೀ ಅಶೋಕ್ ಹಾರನಹಳ್ಳಿ ಅವರೊಡನೆ / 26-06-2026 / with Ashok Haranahalli




ಪ್ರಸಿದ್ಧ ನ್ಯಾಯವಾದಿಗಳೂ, ಕರ್ನಾಟಕದ ಮಾಜಿ ಅಡ್ವೊಕೇಟ್ ಜನರಲ್ ರವರೂ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಾಜಿ ಅಧ್ಯಕ್ಷರೂ, "ಸಂಯುಕ್ತ ಕರ್ನಾಟಕ" ದಿನಪತ್ರಿಕೆಯನ್ನು ಪ್ರಕಟಿಸುತ್ತಿರುವ ಲೋಕ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ನಮ್ಮ ಆತ್ಮೀಯರೂ ಆಗಿರುವ ಶ್ರೀ ಅಶೋಕ್ ಹಾರನಹಳ್ಳಿ ರವರನ್ನು ಭೇಟಿ ಮಾಡುವ ಸದವಕಾಶ ಇಂದು (ದಿ. 26-06-2026) ನನಗೆ ಮತ್ತು ವಿಶ್ವನಾಥನ್ ಗೆ ಒದಗಿಬಂದಿತು.

ತುಮಕೂರು ನಗರದ ಆಲದಮರದ ಪಾರ್ಕ್ ಅವರಣದ ಪ್ರೆಸ್ ಕ್ಲಬ್ ನಲ್ಲಿ ಇಂದು ಮಧ್ಯಾಹ್ನ ಲೋಕ ಶಿಕ್ಷಣ ಟ್ರಸ್ಟ್ ಏರ್ಪಡಿಸಿದ್ದ "ಚಿಂತನ ಮಂಥನ" ಕಾರ್ಯಕ್ರಮಕ್ಕೆ ಟ್ರಸ್ಟ್ ನ ಆಹ್ವಾನದ ಮೇರೆಗೆ ನಾವು ಪಾಲ್ಗೊಂಡಿದ್ದೆವು.
ಶ್ರೀ ಅಶೋಕ್ ಹಾರನಹಳ್ಳಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತುಮಕೂರು ನಗರದ ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್ ರವರು, ಸ್ಫೂರ್ತಿ ಡೆವೆಲಪರ್ಸ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಸ್.ಪಿ. ಚಿದಾನಂದ್ ರವರು, ಖ್ಯಾತ ಕೈಗಾರಿಕೋದ್ಯಮಿ ಹಾಗೂ ಮಾಜಿ ಟೂಡಾ ಅಧ್ಯಕ್ಷರಾದ ಶ್ರೀ ಹೆಚ್.ಜಿ.ಚಂದ್ರಶೇಖರ್ ರವರು, ಮಾಜಿ ಕಾರ್ಪೊರೇಟರ್ ಶ್ರೀ ಸಿ.ಎನ್. ರಮೇಶ್ ರವರು, ಜಿಲ್ಲಾ ಬ್ರಾಹ್ಮಣ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ರಾಘವೇಂದ್ರರವರು, ಮಹಿಳಾ ಸಮಾಜದ ಕಾರ್ಯದರ್ಶಿಗಳಾದ ಶ್ರೀಮತಿ ಸುಭಾಷಿಣಿ ರವೀಶ್ ರವರು ಮತ್ತಿತರ ಗಣ್ಯರು ಭಾಗವಹಿಸಿದ್ದರು. ಲೋಕಶಿಕ್ಷಣ ಟ್ರಸ್ಟ್ ಕಾರ್ಯದರ್ಶಿಗಳಾದ ಶ್ರೀ ಹರಿ ಚನ್ನಕೇಶವರವರು, "ಸಂಯುಕ್ತ ಕರ್ನಾಟಕ" ಪತ್ರಿಕೆಯ ಸಂಪಾದಕರಾದ ಶ್ರೀ ಮಹಾಬಲೇಶ್ವರ ವಿ.ಭಟ್ ರವರು, ತುಮಕೂರು ಜಿಲ್ಲಾ ವರದಿಗಾರರಾದ ಶ್ರೀ ಸತೀಶ್ ಕುಮಾರ್ ಮೊದಲಾದ ಪ್ರಮುಖರೂ ಉಪಸ್ಥಿತರಿದ್ದರು. ಸಭೆಯಲ್ಲಿ ಪತ್ರಿಕೆ ಕುರಿತಂತೆ ಚರ್ಚೆ ನಡೆಯಿತು.
ಶ್ರೀ ಅಶೋಕ್ ಹಾರನಹಳ್ಳಿಯವರು ನಾವು ನಡೆಸುವ "ಡಿವಿಜಿ ನೆನಪು" ಉಪನ್ಯಾಸ ಮಾಲಿಕೆಯ 83 ನೇ ಕಾರ್ಯಕ್ರಮಕ್ಕೆ (ದಿ. 03-03-2023) ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರೆಂಬುದು ಸ್ಮರಣೀಯವಾಗಿದೆ.
-ಆರ್.ಎಸ್.ಅಯ್ಯರ್, ತುಮಕೂರು, ದಿ. 26-06-2026 #rsiyertumakuru