ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Friday, 28 February 2020

ಸನ್ಮಾನ ಸಮಾರಂಭ- ದಿ.28-02-2020. ಶುಕ್ರವಾರ, Felicitation

ತುಮಕೂರಿನ ಕ್ಯಾತಸಂದ್ರದಲ್ಲಿ ಇಂದು (28-02-2020, ಶುಕ್ರವಾರ) ಬೆಳಗ್ಗೆ ಏರ್ಪಟ್ಟಿದ್ದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪರವರ 78 ನೇ ಹುಟ್ಟುಹಬ್ಬ ಸಮಾರಂಭದಲ್ಲಿ ನನ್ನನ್ನು ತುಮಕೂರು ನಗರದ ಶಾಸಕರೂ, ಆತ್ಮೀಯ ಮಿತ್ರರೂ ಆದ ಶ್ರೀ ಜಿ.ಜಿ.ಜ್ಯೋತಿಗಣೇಶ್ ರವರು ಸನ್ಮಾನಿಸಿದರು.  ತುಮಕೂರಿನ ಪ್ರತಿಷ್ಠಿತ ಸಿದ್ದಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಪರಮೇಶ್, ಬಿಜೆಪಿ ಧುರೀಣರಾದ ಶ್ರೀ ಶಿವಪ್ರಸಾದ್, ಶ್ರೀ ರುದ್ರೇಶ್, ತುಮಕೂರು ಮಹಾನಗರ ಪಾಲಿಕೆ ಉಪಮೇಯರ್ ಶ್ರೀಮತಿ ಶಶಿಕಲಾ ಗಂಗಹನುಮಯ್ಯ, ಪಾಲಿಕೆಯ ಅನೇಕ ಸದಸ್ಯರುಗಳು ಉಪಸ್ಥಿತರಿದ್ದರು. ನನ್ನನ್ನು ಆಹ್ವಾನಿಸಿ, ಸನ್ಮಾನಕ್ಕೆ ಕಾರಣಕರ್ತರಾದ ಹಾಗೂ ಈ ಕಾರ್ಯಕ್ರಮ ಆಯೋಜಿಸಿದ್ದ "ಆಟೋ ಯಡಿಯೂರಪ್ಪ" ಎಂದೇ ಪ್ರಸಿದ್ಧರಾಗಿರುವ ಶ್ರೀ ಕೆ.ಎಂ.ಶಿವಕುಮಾರ್ ಅವರಿಗೆ ನಾನು ಕೃತಜ್ಞನಾಗಿದ್ದೇನೆ.










No comments:

Post a Comment