* ಅಸೂಯಾ ಪರಿತ್ಯಾಗವೇ ಆರೋಗ್ಯಭಾಗ್ಯ - * ಉಪಕಾರ ಸ್ಮರಣೆಯೇ ಮನುಷ್ಯನ ಬಲ - * ಪರೋಪಕಾರವೇ ಅಧಿಕಾರ ಪ್ರಯೋಜನ *

Thursday 15 August 2024

Great-grandfather and Great-grandson face off- 14-08-2024- ಮುತ್ತಜ್ಜ-ಮರಿಮಗನ ಮುಖಾಮುಖಿ

 ಮುತ್ತಜ್ಜ-ಮರಿಮಗನ ಮುಖಾಮುಖಿ

ಮುತ್ತಜ್ಜ ವಿ.ಎಸ್.ರಾಮಚಂದ್ರನ್ (95) ಮತ್ತು ಮರಿಮಗ ಕೃಷ್ಣ (ಒಂದೂಮುಕ್ಕಾಲು ವರ್ಷ) ಪರಸ್ಪರ ಮುಖಾಮುಖಿ ಆಗಿ ಖುಷಿಪಟ್ಟರು.  

ಪುಟಾಣಿ ಕೃಷ್ಣ  ತನ್ನ ತಾಯಿ ಶ್ರೀಮತಿ ಸುನಯನ (ರಾಮಚಂದ್ರನ್ ರವರ ಮೊಮ್ಮಗಳು- ಸಾಫ್ಟ್ ವೇರ್ ಇಂಜಿನಿಯರ್),  ತನ್ನ ಅಜ್ಜಿ ಶ್ರೀಮತಿ ರಾಜೇಶ್ವರಿ (ರಾಮಚಂದ್ರನ್ ರವರ ಮಗಳು) ಮತ್ತು ತನ್ನ ತಾತ ಶ್ರೀ ಹೆಚ್.ಕೆ.ವೇಣುಗೋಪಾಲ್ (ಎಲೆಕ್ಟ್ರಿಕಲ್ ಕಂಟ್ರಾಕ್ಟರ್) ರವರ ಜೊತೆಯಲ್ಲಿ ದಿನಾಂಕ 14-08-2024 ರಂದು ಸಂಜೆ ನಮ್ಮ ಮನೆಗೆ ಆಗಮಿಸಿದ್ದಾಗ ಈ ಮುಖಾಮುಖಿ ಆಯಿತು. 

ಮರಿಮಗ ಕೃಷ್ಣ ತನ್ನ ಮುತ್ತಜ್ಜನ ಕೆನ್ನೆ ಸವರಿದ. ಗಡ್ಡ ಹಿಡಿದುಕೊಂಡ. ಕೈಕುಲುಕಿದ. ಪಾದಕ್ಕೆ ನಮಸ್ಕರಿಸಿದ. ಇವೆಲ್ಲ ಸಂದರ್ಭಗಳಲ್ಲೂ ಈರ್ವರ ಮೊಗದಲ್ಲೂ ಅನಿರ್ವಚನೀಯ ಸಂತಸ ಭೋರ್ಗರೆಯಿತು. ನಾನು ಮತ್ತು ಆರ್.ವಿಶ್ವನಾಥನ್ ಇದಕ್ಕೆ ಸಾಕ್ಷಿಯಾದೆವು. 

-ಆರ್.ಎಸ್.ಅಯ್ಯರ್, ತುಮಕೂರು, ದಿ. 14-08-2024




















Sunday 11 August 2024

VSR Sanmana- 2024 August- ಜಿಲ್ಲಾಡಳಿತದಿಂದ ವಿ.ಎಸ್.ರಾಮಚಂದ್ರನ್ ರವರಿಗೆ ಸನ್ಮಾನ

 ಜಿಲ್ಲಾಡಳಿತದಿಂದ ವಿ.ಎಸ್.ರಾಮಚಂದ್ರನ್ ರವರಿಗೆ ಸನ್ಮಾನ 2024 ---------------------------------

ತುಮಕೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (95 ವರ್ಷಗಳು) ಅವರನ್ನು 78 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತವು ಇಂದು (ದಿ. 09-08-2024) ಸಂಜೆ ನಮ್ಮ ಮನೆಗೇ ಆಗಮಿಸಿ ಸನ್ಮಾನಿಸಿತು. ತುಮಕೂರು ತಾಲ್ಲೂಕು ಕಚೇರಿಯ ಅಧಿಕಾರಿಗಳು ಆಗಮಿಸಿ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ, ಫಲತಾಂಬೂಲ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ನಾನು ಮತ್ತು ವಿಶ್ವನಾಥನ್ ಇದ್ದೆವು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 09-08-2024 #rsiyertumakuru
Tumkur district administration honored our father Shri V.S. Ramachandran (95 Years), a senior freedom fighter of Tumkur, on the occasion of 78th Independence Day celebrations by arriving at our home today (09-08-2024) evening. Officials of Tumkur taluk office came and honored Sri V S Ramachandran. Viswanathan and I were present on this occasion.
-R S Iyer, Tumakuru, Karnataka,




__________________________________________________





--------------------------------------------------
---------------------------------------------------
-------------------------------------------------------------
-------------------------------------------------------------
--------------------------------------------------------------------


ತಿಮ್ಮನಾಯಕನಹಳ್ಳಿ ಕೆರೆ- Thimmanayakanahalli lake 2024

ಮನಮೋಹಕ ವಾತಾವರಣ, ಪ್ರಶಾಂತ ಪರಿಸರ, ಸುತ್ತಲೂ ಬೆಟ್ಟಗುಡ್ಡಗಳು ಹಾಗೂ ಎತ್ತರದ ಮರಗಳು, ಆಗಾಗ ಬೆಟ್ಟದ ಯಾವುದೋ ಮೂಲೆಯಿಂದ ಪ್ರತಿಧ್ವನಿಸುವ ನವಿಲುಗಳ ಕೂಗು .... ತಿಮ್ಮನಾಯಕನಹಳ್ಳಿ ಕೆರೆಯ ಸುಂದರ ಪರಿಸರ ಮನಸೂರೆಗೊಳ್ಳುತ್ತದೆ. ನಿನ್ನೆ ಸೂರ್ಯಾಸ್ತದ ಹೊತ್ತಲ್ಲಿ ನಾನು ಮತ್ತು ವಿಶ್ವನಾಥನ್ ಅಲ್ಲಿದ್ದೆವು.

-ಆರ್.ಎಸ್.ಅಯ್ಯರ್, ತುಮಕೂರು, ದಿ. 28-07-2024
Enchanting atmosphere, peaceful environment, surrounded by hills and tall trees, every now and then the sound of peacocks echoing from some corner of the hill....the beautiful environment of Thimmanayakanahalli lake is captivating. Viswanathan and I were there yesterday at sunset.
-R S Iyer, Tumakuru, 28-07-2024 #rsiyertumakuru