* ಅಸೂಯಾ ಪರಿತ್ಯಾಗವೇ ಆರೋಗ್ಯಭಾಗ್ಯ - * ಉಪಕಾರ ಸ್ಮರಣೆಯೇ ಮನುಷ್ಯನ ಬಲ - * ಪರೋಪಕಾರವೇ ಅಧಿಕಾರ ಪ್ರಯೋಜನ *

Sunday 29 September 2024

ಮರಿಮಗನೊಡನೆ ಮುತ್ತಜ್ಜ- Vivek- 2024- VSR with great grand son

 “ಹೊಸ ಚಿಗುರು ಹಳೆಬೇರು ಕೂಡಿರಲು ಮರಸೊಬಗು….”

-------------------------------------
ಈಗಷ್ಟೇ ಮೂರು ತಿಂಗಳು ತುಂಬಿದ ಮರಿಮಗನನ್ನು ಕಂಡು 95 ರ ಮುತ್ತಜ್ಜ ಆನಂದಿಸಿದರು.
ನಮ್ಮ ಸಹೋದರಿ ಶ್ರೀಮತಿ ಆರ್. ರಾಜೇಶ್ವರಿ- ಶ್ರೀ ಹೆಚ್.ಕೆ.ವೇಣುಗೋಪಾಲ್ ದಂಪತಿಯ ಪುತ್ರ ಇಂಜಿನಿಯರ್ ವಿ.ವಿವೇಕ್ ಮತ್ತು ಇಂಜಿನಿಯರ್ ಶ್ರೀಮತಿ ರಶ್ಮಿ ದಂಪತಿ ಇಂದು (ದಿ. 29-09-2024, ಭಾನುವಾರ) ಸಂಜೆ ತಮ್ಮ ಮೂರು ತಿಂಗಳ ಗಂಡು ಮಗುವಿನೊಂದಿಗೆ ನಮ್ಮ ಮನೆಗೆ ಆಗಮಿಸಿದ್ದರು. ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (95) ಅವರಿಗೆ ಮಗುವನ್ನು ತೋರಿಸಿ, ಆಶೀರ್ವಾದ ಪಡೆದುಕೊಂಡರು. ಆಗ ಮಗುವನ್ನು ಮುತ್ತಜ್ಜ ತಮ್ಮ ತೊಡೆಯ ಮೇಲೆ ಕೂರಿಸಿಕೊಂಡರು. ಕೈಕಾಲು ಆಡಿಸುತ್ತ ಆಟವಾಡುತ್ತಿದ್ದ ಮರಿಮಗನನ್ನು ನೋಡುತ್ತ, ಮರಿಮಗನ ನಸುನಗು ಹಾಗೂ ಜೋರು ದನಿಯ ಅಳು ಕೇಳುತ್ತ ಮುತ್ತಜ್ಜ ಮೈಮರೆತರು. ಅದನ್ನು ನೋಡುತ್ತ ನಾವುಗಳೂ ಸಂತೋಷಪಟ್ಟೆವು. ನಾನು ಮತ್ತು ವಿಶ್ವನಾಥನ್ ಇದ್ದೆವು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 29-09-2024







No comments:

Post a Comment