* ಅಸೂಯಾ ಪರಿತ್ಯಾಗವೇ ಆರೋಗ್ಯಭಾಗ್ಯ - * ಉಪಕಾರ ಸ್ಮರಣೆಯೇ ಮನುಷ್ಯನ ಬಲ - * ಪರೋಪಕಾರವೇ ಅಧಿಕಾರ ಪ್ರಯೋಜನ *

Friday 4 October 2024

Kali Maa Statue- 2024- ಕಾಳಿ ಪ್ರತಿಮೆ ತಂಗನಹಳ್ಳಿ

 ಕಾಳಿ ಮಾತೆಯ ಈ ಆಕರ್ಷಕ ವಿಗ್ರಹದ ದರ್ಶನ ಶರನ್ನವರಾತ್ರಿಯ ಮೊದಲ ದಿನವಾದ ಇಂದು (03-10-2024, ಗುರುವಾರ) ನಮಗಾಯಿತು. ನಾನು ಮತ್ತು ಆರ್.ವಿಶ್ವನಾಥನ್ ಇಂದು ತಂಗನಹಳ್ಳಿ ಕೆರೆಯ ಬಳಿ ಹೋಗಿದ್ದಾಗ ಕೆರೆಯ ಕೋಡಿ ಹತ್ತಿರ ರಸ್ತೆ ಬದಿಯಲ್ಲೇ ಬಂಡೆಯೊಂದರ ಮೇಲೆ ನಿರ್ಮಿಸಿರುವ ಈ ಕಾಳಿ ಮಾತೆಯ ಬೃಹತ್ ವಿಗ್ರಹ ಗಮನಸೆಳೆಯಿತು. ಇದೇ ಮೊದಲ ಬಾರಿಗೆ ಕಾಳಿಯ ಇಂತಹುದೊಂದು ವಿಗ್ರಹವನ್ನು ಈ ಭಾಗದಲ್ಲಿ ನೋಡಿ ನಮಗೆ ಆನಂದಾಶ್ಚರ್ಯಗಳಾದವು.

ಸುಮಾರು ಮೂರು ಅಡಿಗಳಷ್ಟು ಎತ್ತರದ ಪೀಠದ ಮೇಲೆ ಏಳು ಅಡಿ ಎತ್ತರದ ಕಾಳಿ ಮಾತೆಯ ವಿಗ್ರಹವನ್ನು ಸುಂದರವಾಗಿ ನಿರ್ಮಿಸಲಾಗಿದೆ. ದೇವಿಯ ಎದುರುಬದಿ ದೊಡ್ಡದಾದ ತ್ರಿಶೂಲವಿದೆ. ಬಂಡೆಗಲ್ಲಿನ ಮೇಲೆ ಈ ವಿಗ್ರಹವಿದೆ. ಹಿಂಬದಿ ತಂಗನಹಳ್ಳಿ ಕೆರೆಯ ವಿಹಂಗಮ ನೋಟವಿದೆ. ಖಾಸಗಿ ವ್ಯಕ್ತಿಯೊಬ್ಬರು ತಮಿಳುನಾಡಿನ ಶಿಲ್ಪಿಗಳನ್ನು ಕರೆಸಿ ಅವರಿಂದ ಈ ವಿಗ್ರಹವನ್ನು ಕೆಲ ವರ್ಷಗಳ ಹಿಂದೆ ನಿರ್ಮಿಸಿದ್ದಾರೆ.
-ಆರ್.ಎಸ್.ಅಯ್ಯರ್, ತುಮಕೂರು, ದಿ. 03-10-2024, #rsiyertumakuru





No comments:

Post a Comment