"ಈಗ ಹೊರಡುತ್ತಿದ್ದೇವೆ. 9 ಗಂಟೆ ಹೊತ್ತಿಗೆ ನಿಮ್ಮ ಮನೆಗೆ ಬರುತ್ತೇವೆ" ಎಂದು ಇಂದು (ದಿ. 23-11-2025) ಬೆಳಗ್ಗೆ 7 ಗಂಟೆಯಲ್ಲಿ ಬೆಂಗಳೂರಿನಿಂದ ನಮ್ಮ ಚಿಕ್ಕಪ್ಪ ಶ್ರೀ ಹೆಚ್.ಎಸ್.ಶ್ರೀನಿವಾಸನ್ ರವರು ವಿಶ್ವನಾಥನ್ ಗೆ ಕರೆ ಮಾಡಿದ್ದರು. ಅದರಂತೆ ಬೆಳಗ್ಗೆ 9-30 ರ ಹೊತ್ತಿಗೆ ನಮ್ಮ ಚಿಕ್ಕಮ್ಮ ಶ್ರೀಮತಿ ವಿಮಲ ಅವರೊಡನೆ ಕಾರಿನಲ್ಲಿ ಬಂದಿಳಿದರು. ದಾರಿಯುದ್ದಕ್ಕೂ ಟ್ರಾಫಿಕ್ ಇದ್ದುದರಿಂದ ಅರ್ಧ ಗಂಟೆ ವಿಳಂಬವಾಯಿತು ಎಂದರು.
ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (96) ರವರನ್ನು ನೋಡಿ ಕುಶಲೋಪರಿ ವಿಚಾರಿಸಲೆಂದೇ ಆಗಮಿಸಿದ್ದ ಶ್ರೀನಿವಾಸನ್ ಮತ್ತು ವಿಮಲ ದಂಪತಿ, ನಮ್ಮ ತಂದೆಗೆ ಫಲತಾಂಬೂಲ ನೀಡಿ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಒಂದರ್ಧ ಗಂಟೆ ಇದ್ದು ಮಾತುಕತೆಯಾಡುತ್ತಾ ವಿವಿಧ ಪ್ರಸಂಗಗಳನ್ನು ಮೆಲುಕು ಹಾಕಿದರು. ಬರುವಾಗ ದಾರಿಯಲ್ಲೇ ಉಪಾಹಾರ ಮಾಡಿಕೊಂಡು ಬಂದಿದ್ದುದರಿಂದ, ನಮ್ಮ ಮನೆಯಲ್ಲಿ ಚಹಾ ಸೇವಿಸಿ ಮತ್ತೆ ವಾಪಸ್ ಬೆಂಗಳೂರಿಗೆ ಹೊರಟರು. ಒಂದು ವರ್ಷದ ಬಳಿಕ ಅವರು ಇಲ್ಲಿಗೆ ಆಗಮಿಸಿ ನಮ್ಮೆಲ್ಲರನ್ನೂ ಭೇಟಿಯಾದದ್ದು ಉಭಯತ್ರರಲ್ಲೂ ಹರ್ಷೋಲ್ಲಾಸವನ್ನುಂಟುಮಾಡಿತು.




No comments:
Post a Comment