ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Monday, 24 November 2025

Smt Vimala & H S Srinivasan Visit - 2025- ವಿಮಲ ಮತ್ತು ಶ್ರೀನಿವಾಸನ್ ಭೇಟಿ

 



"ಈಗ ಹೊರಡುತ್ತಿದ್ದೇವೆ. 9 ಗಂಟೆ ಹೊತ್ತಿಗೆ ನಿಮ್ಮ ಮನೆಗೆ ಬರುತ್ತೇವೆ" ಎಂದು ಇಂದು (ದಿ. 23-11-2025) ಬೆಳಗ್ಗೆ 7 ಗಂಟೆಯಲ್ಲಿ ಬೆಂಗಳೂರಿನಿಂದ ನಮ್ಮ ಚಿಕ್ಕಪ್ಪ ಶ್ರೀ ಹೆಚ್.ಎಸ್.ಶ್ರೀನಿವಾಸನ್ ರವರು ವಿಶ್ವನಾಥನ್ ಗೆ ಕರೆ ಮಾಡಿದ್ದರು. ಅದರಂತೆ ಬೆಳಗ್ಗೆ 9-30 ರ ಹೊತ್ತಿಗೆ ನಮ್ಮ ಚಿಕ್ಕಮ್ಮ ಶ್ರೀಮತಿ ವಿಮಲ ಅವರೊಡನೆ ಕಾರಿನಲ್ಲಿ ಬಂದಿಳಿದರು. ದಾರಿಯುದ್ದಕ್ಕೂ ಟ್ರಾಫಿಕ್ ಇದ್ದುದರಿಂದ ಅರ್ಧ ಗಂಟೆ ವಿಳಂಬವಾಯಿತು ಎಂದರು.

ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (96) ರವರನ್ನು ನೋಡಿ ಕುಶಲೋಪರಿ ವಿಚಾರಿಸಲೆಂದೇ ಆಗಮಿಸಿದ್ದ ಶ್ರೀನಿವಾಸನ್ ಮತ್ತು ವಿಮಲ ದಂಪತಿ, ನಮ್ಮ ತಂದೆಗೆ ಫಲತಾಂಬೂಲ ನೀಡಿ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಒಂದರ್ಧ ಗಂಟೆ ಇದ್ದು ಮಾತುಕತೆಯಾಡುತ್ತಾ ವಿವಿಧ ಪ್ರಸಂಗಗಳನ್ನು ಮೆಲುಕು ಹಾಕಿದರು. ಬರುವಾಗ ದಾರಿಯಲ್ಲೇ ಉಪಾಹಾರ ಮಾಡಿಕೊಂಡು ಬಂದಿದ್ದುದರಿಂದ, ನಮ್ಮ ಮನೆಯಲ್ಲಿ ಚಹಾ ಸೇವಿಸಿ ಮತ್ತೆ ವಾಪಸ್ ಬೆಂಗಳೂರಿಗೆ ಹೊರಟರು. ಒಂದು ವರ್ಷದ ಬಳಿಕ ಅವರು ಇಲ್ಲಿಗೆ ಆಗಮಿಸಿ ನಮ್ಮೆಲ್ಲರನ್ನೂ ಭೇಟಿಯಾದದ್ದು ಉಭಯತ್ರರಲ್ಲೂ ಹರ್ಷೋಲ್ಲಾಸವನ್ನುಂಟುಮಾಡಿತು.
-ಆರ್.ಎಸ್.ಅಯ್ಯರ್, ತುಮಕೂರು, ದಿ.23-11-2025 #rsiyertumakuru





No comments:

Post a Comment