ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Monday, 10 August 2026

VSR Sanmana- Swathanthrothsava -2026 / ವಿ.ಎಸ್.ಆರ್. ಸ್ವಾತಂತ್ರ್ಯೋತ್ಸವ ಸನ್ಮಾನ-2026 / 09-08-2026


 
"ಸ್ವಾತಂತ್ರ್ಯೋತ್ಸವ-2026" ರ ಪೂರ್ವಭಾವಿಯಾಗಿ ತುಮಕೂರು ಜಿಲ್ಲಾಡಳಿತದ ಪರವಾಗಿ ತುಮಕೂರು ತಾಲ್ಲೂಕು ತಹಸೀಲ್ದಾರರಾದ ಶ್ರೀಮತಿ ಪಿ.ಎಸ್.ರಾಜೇಶ್ವರಿ KAS ಅವರು ಇಂದು (ದಿ.09-08-2026) ನಮ್ಮ ಮನೆಗೆ ಆಗಮಿಸಿ, ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರನ್ನು ಸನ್ಮಾನಿಸಿದರು. ನಾನು ಮತ್ತು ವಿಶ್ವನಾಥನ್ ಈ ಸಂದರ್ಭದಲ್ಲಿ ಇದ್ದೆವು.

ತಹಸೀಲ್ದಾರ್ ರವರ ಜೊತೆಯಲ್ಲಿ ರೆವಿನ್ಯೂ ಅಧಿಕಾರಿ ಶ್ರೀ ಶಿವಾನಂದ ರೆಡ್ಡಿ, ಶೆಟ್ಟಿಹಳ್ಳಿ ಗ್ರಾಮ ಆಡಳಿತಾಧಿಕಾರಿ ಶ್ರೀ ರವಿಕುಮಾರ್ ಮತ್ತು ಮರಳೂರು ಗ್ರಾಮ ಆಡಳಿತಾಧಿಕಾರಿ ಕು. ದಿವ್ಯ ರವರು ಆಗಮಿಸಿದ್ದರು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 09-08-2026






**********************************************************

Youtube Video



No comments:

Post a Comment